ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.
ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.
ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್ಎಸ್ಎಲ್ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪಟ್ಟಣದ ತನ್ನ ಕ್ಲಿನಿಕ್ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್ ಪಡೆದ ಫಾರ್ಮ್ಹೌಸ್ನಲ್ಲಿ ಹೂಳುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್ ಕುಪ್ಪಸಗೌಡರ್ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು. ಪಟ್ಟಣದ ಕ್ಲಿನಿಕ್ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…