ರಾಜ್ಯ

ಬೆಳಗಾವಿ: ನಕಲಿ ವೈದ್ಯನಿಂದ ಭ್ರೂಣ ಹತ್ಯೆ

ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್‌ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.

ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್‌ಎಸ್‌ಎಲ್‌ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪಟ್ಟಣದ ತನ್ನ ಕ್ಲಿನಿಕ್‌ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್‌ ಪಡೆದ ಫಾರ್ಮ್‌ಹೌಸ್‌ನಲ್ಲಿ ಹೂಳುತ್ತಿದ್ದ. ಈ  ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್‌ ಕುಪ್ಪಸಗೌಡರ್‌ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು.  ಪಟ್ಟಣದ ಕ್ಲಿನಿಕ್‌ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.

 

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 hours ago