ರಾಜ್ಯ

ಬೆಳಗಾವಿ: ನಕಲಿ ವೈದ್ಯನಿಂದ ಭ್ರೂಣ ಹತ್ಯೆ

ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್‌ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.

ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್‌ಎಸ್‌ಎಲ್‌ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಪಟ್ಟಣದ ತನ್ನ ಕ್ಲಿನಿಕ್‌ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್‌ ಪಡೆದ ಫಾರ್ಮ್‌ಹೌಸ್‌ನಲ್ಲಿ ಹೂಳುತ್ತಿದ್ದ. ಈ  ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್‌ ಕುಪ್ಪಸಗೌಡರ್‌ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು.  ಪಟ್ಟಣದ ಕ್ಲಿನಿಕ್‌ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.

 

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago