ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.
ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.
ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್ಎಸ್ಎಲ್ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪಟ್ಟಣದ ತನ್ನ ಕ್ಲಿನಿಕ್ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್ ಪಡೆದ ಫಾರ್ಮ್ಹೌಸ್ನಲ್ಲಿ ಹೂಳುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್ ಕುಪ್ಪಸಗೌಡರ್ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು. ಪಟ್ಟಣದ ಕ್ಲಿನಿಕ್ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…