ರಾಜ್ಯ

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆಯಲ್ಲೊ ಓರ್ವ ಮೃತಪಟ್ಟಿದ್ದಾನೆ ಎಂದು ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.

ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲು ತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ.

ಗಲಾಟೆಗೆ ಕಾರಣವಾದರೂ ಏನು?
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಅದರಂತೆ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಜನಾರ್ದನ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಆಗಮಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ಮಧ್ಯೆ ಜಗಳ ವಾಗ್ವಾದ ನಡೆದಿದ್ದು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಈಗಾಗಲೇ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಜಿಲ್ಲಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಹಲವು ಮನೆಗಳ ಮೇಲೆ ಕಲ್ಲು ತೂರಾಟವೂ ನಡೆದಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

10 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

21 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

1 hour ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago