ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆಯಲ್ಲೊ ಓರ್ವ ಮೃತಪಟ್ಟಿದ್ದಾನೆ ಎಂದು ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.
ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲು ತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ.
ಗಲಾಟೆಗೆ ಕಾರಣವಾದರೂ ಏನು?
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಅದರಂತೆ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಜನಾರ್ದನ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಆಗಮಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ಮಧ್ಯೆ ಜಗಳ ವಾಗ್ವಾದ ನಡೆದಿದ್ದು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಈಗಾಗಲೇ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಜಿಲ್ಲಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಹಲವು ಮನೆಗಳ ಮೇಲೆ ಕಲ್ಲು ತೂರಾಟವೂ ನಡೆದಿದೆ ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…