ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆಯಲ್ಲೊ ಓರ್ವ ಮೃತಪಟ್ಟಿದ್ದಾನೆ ಎಂದು ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.
ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲು ತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ.
ಗಲಾಟೆಗೆ ಕಾರಣವಾದರೂ ಏನು?
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಅದರಂತೆ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಜನಾರ್ದನ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಆಗಮಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ಮಧ್ಯೆ ಜಗಳ ವಾಗ್ವಾದ ನಡೆದಿದ್ದು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಈಗಾಗಲೇ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಜಿಲ್ಲಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಹಲವು ಮನೆಗಳ ಮೇಲೆ ಕಲ್ಲು ತೂರಾಟವೂ ನಡೆದಿದೆ ಎನ್ನಲಾಗಿದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…