ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು 3 ಸಾವಿರ ಕೋಳಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇನ್ನೊಂದು ವರದಿಯಾಗಿದೆ. ರವಿ ಎಂಬುವವರಿಗೆ ಸೇರಿದ ಕೋಳಿಫಾರಂನಲ್ಲಿ 15 ಸಾವಿರ ಕೋಳಿಗಳು ಇದ್ದು, ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇನ್ನೂ ಹೆಚ್ಚಿನ ಕೋಳಿಗಳು ಸಾಯುವ ಆತಂಕ ಎದುರಾಗಿದೆ.
ಮೃತ ಕೋಳಿಗಳ ಮಾದರಿಯನ್ನು ಭೂಪಾಲ್ನಲ್ಲಿರುವ ರಾಷ್ಟ್ರೀಯ ಪ್ರಾಣಿರೋಗಗಳ ಸಂಸ್ಥೆಗೆ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೆರೆಡು ದಿನಗಳಲ್ಲಿ ಅಲ್ಲಿಂದ ವರದಿ ಬರುವ ಸಾಧ್ಯತೆಯಿದೆ. ಹಕ್ಕಿ ಜ್ವರ ಎಂದು ಮೃತಪಟ್ಟರೆ ಎಲ್ಲಾ ಕೋಳಿಗಳನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಕಾರಬಾರಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು ಚೆಕ್ಪೋಸ್ಟ್ಗಳ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 74 ಕೋಳಿ ಫಾರಂ ಹಾಗೂ 14 ಮೊಟ್ಟೆ ಸಂವರ್ಧನ ಕೇಂದ್ರಗಳಿದ್ದು, ಇವುಗಳ ಮೇಲೂ ಕೂಡ ನಿಗಾ ವಹಿಸಲಾಗಿದೆ.
ಕುರೆಕುಪ್ಪ ಜಾನುವಾರು ಸಂವರ್ಧನ ಕೇಂದ್ರದಲ್ಲಿ ಕೋಳಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಕುರೆಕುಪ್ಪ ಪುರಸಭೆ ಮತ್ತು ಜಾನುವಾರು ಸಂವರ್ಧನೆ ಕೇಂದ್ರ ವ್ಯಾಪ್ತಿಯಲ್ಲಿ ಕೋಳಿ ಮತ್ತು ಮೊಟ್ಟೆ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೋಟೆಲ್, ಡಾಬಾ, ರಸ್ತೆ ಬದಿ ತಳ್ಳುವ ಗಾಡಿಗಳಲ್ಲಿ ಆಹಾರ ಪದಾರ್ಥ ಸಿದ್ಧಪಡಿಸದಂತೆ ಸೂಚಿಸಲಾಗಿದೆ.
ಕುರೆಕುಪ್ಪ ಗ್ರಾಮದ 1 ಕಿ.ಮೀ. ವ್ಯಾಪ್ತಿಯನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ. ಹಕ್ಕಿಜ್ವರ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…