ರಾಜ್ಯ

ಬಳ್ಳಾರಿ | ರಾಜ್ಯದಲ್ಲಿ ಹೆಚ್ಚಾದ ಹಕ್ಕಿ ಜ್ವರ ಭೀತಿ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು 3 ಸಾವಿರ ಕೋಳಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇನ್ನೊಂದು ವರದಿಯಾಗಿದೆ.  ರವಿ ಎಂಬುವವರಿಗೆ ಸೇರಿದ ಕೋಳಿಫಾರಂನಲ್ಲಿ 15 ಸಾವಿರ ಕೋಳಿಗಳು ಇದ್ದು, ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇನ್ನೂ ಹೆಚ್ಚಿನ ಕೋಳಿಗಳು ಸಾಯುವ ಆತಂಕ ಎದುರಾಗಿದೆ.

ಮೃತ ಕೋಳಿಗಳ ಮಾದರಿಯನ್ನು ಭೂಪಾಲ್‌ನಲ್ಲಿರುವ ರಾಷ್ಟ್ರೀಯ ಪ್ರಾಣಿರೋಗಗಳ ಸಂಸ್ಥೆಗೆ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೆರೆಡು ದಿನಗಳಲ್ಲಿ ಅಲ್ಲಿಂದ ವರದಿ ಬರುವ ಸಾಧ್ಯತೆಯಿದೆ. ಹಕ್ಕಿ ಜ್ವರ ಎಂದು ಮೃತಪಟ್ಟರೆ ಎಲ್ಲಾ ಕೋಳಿಗಳನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಕಾರಬಾರಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು ಚೆಕ್‌ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 74 ಕೋಳಿ ಫಾರಂ ಹಾಗೂ 14 ಮೊಟ್ಟೆ ಸಂವರ್ಧನ ಕೇಂದ್ರಗಳಿದ್ದು, ಇವುಗಳ ಮೇಲೂ ಕೂಡ ನಿಗಾ ವಹಿಸಲಾಗಿದೆ.

ಕುರೆಕುಪ್ಪ ಜಾನುವಾರು ಸಂವರ್ಧನ ಕೇಂದ್ರದಲ್ಲಿ ಕೋಳಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಕುರೆಕುಪ್ಪ ಪುರಸಭೆ ಮತ್ತು ಜಾನುವಾರು ಸಂವರ್ಧನೆ ಕೇಂದ್ರ ವ್ಯಾಪ್ತಿಯಲ್ಲಿ ಕೋಳಿ ಮತ್ತು ಮೊಟ್ಟೆ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೋಟೆಲ್‌, ಡಾಬಾ, ರಸ್ತೆ ಬದಿ ತಳ್ಳುವ ಗಾಡಿಗಳಲ್ಲಿ ಆಹಾರ ಪದಾರ್ಥ ಸಿದ್ಧಪಡಿಸದಂತೆ ಸೂಚಿಸಲಾಗಿದೆ.

ಕುರೆಕುಪ್ಪ ಗ್ರಾಮದ 1 ಕಿ.ಮೀ. ವ್ಯಾಪ್ತಿಯನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ. ಹಕ್ಕಿಜ್ವರ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago