ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು 3 ಸಾವಿರ ಕೋಳಿಗಳು ಸಾವನ್ನಪ್ಪಿರುವ ಬೆನ್ನಲ್ಲೇ ಇನ್ನೊಂದು ವರದಿಯಾಗಿದೆ. ರವಿ ಎಂಬುವವರಿಗೆ ಸೇರಿದ ಕೋಳಿಫಾರಂನಲ್ಲಿ 15 ಸಾವಿರ ಕೋಳಿಗಳು ಇದ್ದು, ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇನ್ನೂ ಹೆಚ್ಚಿನ ಕೋಳಿಗಳು ಸಾಯುವ ಆತಂಕ ಎದುರಾಗಿದೆ.
ಮೃತ ಕೋಳಿಗಳ ಮಾದರಿಯನ್ನು ಭೂಪಾಲ್ನಲ್ಲಿರುವ ರಾಷ್ಟ್ರೀಯ ಪ್ರಾಣಿರೋಗಗಳ ಸಂಸ್ಥೆಗೆ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೆರೆಡು ದಿನಗಳಲ್ಲಿ ಅಲ್ಲಿಂದ ವರದಿ ಬರುವ ಸಾಧ್ಯತೆಯಿದೆ. ಹಕ್ಕಿ ಜ್ವರ ಎಂದು ಮೃತಪಟ್ಟರೆ ಎಲ್ಲಾ ಕೋಳಿಗಳನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಕಾರಬಾರಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು ಚೆಕ್ಪೋಸ್ಟ್ಗಳ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 74 ಕೋಳಿ ಫಾರಂ ಹಾಗೂ 14 ಮೊಟ್ಟೆ ಸಂವರ್ಧನ ಕೇಂದ್ರಗಳಿದ್ದು, ಇವುಗಳ ಮೇಲೂ ಕೂಡ ನಿಗಾ ವಹಿಸಲಾಗಿದೆ.
ಕುರೆಕುಪ್ಪ ಜಾನುವಾರು ಸಂವರ್ಧನ ಕೇಂದ್ರದಲ್ಲಿ ಕೋಳಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಕುರೆಕುಪ್ಪ ಪುರಸಭೆ ಮತ್ತು ಜಾನುವಾರು ಸಂವರ್ಧನೆ ಕೇಂದ್ರ ವ್ಯಾಪ್ತಿಯಲ್ಲಿ ಕೋಳಿ ಮತ್ತು ಮೊಟ್ಟೆ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೋಟೆಲ್, ಡಾಬಾ, ರಸ್ತೆ ಬದಿ ತಳ್ಳುವ ಗಾಡಿಗಳಲ್ಲಿ ಆಹಾರ ಪದಾರ್ಥ ಸಿದ್ಧಪಡಿಸದಂತೆ ಸೂಚಿಸಲಾಗಿದೆ.
ಕುರೆಕುಪ್ಪ ಗ್ರಾಮದ 1 ಕಿ.ಮೀ. ವ್ಯಾಪ್ತಿಯನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ. ಹಕ್ಕಿಜ್ವರ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…