ರಾಜ್ಯ

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕøತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಹೇಳಿರುವ ಅವರು, ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿರುವುದು, ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

1 hour ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago