ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗಲಾಟೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆವಾಗ ಗುಂಡು ರಾಜಶೇಖರ್ ಗೆ ತಗುಲಿದೆ. ಘಟನೆ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಯಾರ ಗನ್ ನಿಂದ ಹಾರಿದ ಗುಂಡು ತಗುಲಿದೆ ಎಂದು ತನಿಖೆ ನಡೆಯಲಿದೆ. ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಸಿಎಂ ಶುಕ್ರವಾರ ಮಧ್ಯಾಹ್ನ ಹೇಳಿದ್ದಾರೆ.
ಶಾಸಕ ಭರತ್ ರೆಡ್ಡಿ ವಿರುದ್ಧ ಗರಂ
ಈ ನಡುವೆ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ಶಾಸಕ ನಾರಾ ಭರತ್ ರೆಡ್ಡಿ ವಿರುದ್ದ ಗರಂ ಆಗಿದ್ದಾರೆ ಎನ್ನಲಾಗಿದೆ. ಭರತ್ ರೆಡ್ಡಿ ಜತೆ ಫೋನ್ ಮೂಲಕ ಮಾತನಾಡಿಸಲು ನಾಯಕರು ಮುಂದಾಗಿದ್ದರು. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ನಾನು ಅವನ ಜೊತೆ ಮಾತನಾಡುವುದಿಲ್ಲ ಎಂದು ಹೇಳಿ ಬಿ.ನಾಗೇಂದ್ರ ಅವರ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕೆ ತೆರಳುವಂತೆ ಕಂಪ್ಲಿ ಶಾಸಕ ಗಣೇಶ್ ಗೂ ಸೂಚಿಸಿದ್ದಾರೆ ಎನ್ನಲಾಗಿದೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…