ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗಲಾಟೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆವಾಗ ಗುಂಡು ರಾಜಶೇಖರ್ ಗೆ ತಗುಲಿದೆ. ಘಟನೆ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಯಾರ ಗನ್ ನಿಂದ ಹಾರಿದ ಗುಂಡು ತಗುಲಿದೆ ಎಂದು ತನಿಖೆ ನಡೆಯಲಿದೆ. ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಸಿಎಂ ಶುಕ್ರವಾರ ಮಧ್ಯಾಹ್ನ ಹೇಳಿದ್ದಾರೆ.
ಶಾಸಕ ಭರತ್ ರೆಡ್ಡಿ ವಿರುದ್ಧ ಗರಂ
ಈ ನಡುವೆ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ಶಾಸಕ ನಾರಾ ಭರತ್ ರೆಡ್ಡಿ ವಿರುದ್ದ ಗರಂ ಆಗಿದ್ದಾರೆ ಎನ್ನಲಾಗಿದೆ. ಭರತ್ ರೆಡ್ಡಿ ಜತೆ ಫೋನ್ ಮೂಲಕ ಮಾತನಾಡಿಸಲು ನಾಯಕರು ಮುಂದಾಗಿದ್ದರು. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ನಾನು ಅವನ ಜೊತೆ ಮಾತನಾಡುವುದಿಲ್ಲ ಎಂದು ಹೇಳಿ ಬಿ.ನಾಗೇಂದ್ರ ಅವರ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕೆ ತೆರಳುವಂತೆ ಕಂಪ್ಲಿ ಶಾಸಕ ಗಣೇಶ್ ಗೂ ಸೂಚಿಸಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…