ರಾಜ್ಯ

ಬಳ್ಳಾರಿ ಫೈರಿಂಗ್‌ ಪ್ರಕರಣ: ಸಿಐಡಿಯಿಂದ ಇಬ್ಬರು ಗನ್‌ಮ್ಯಾನ್‌ಗಳು ಅರೆಸ್ಟ್‌

ಬಳ್ಳಾರಿ: ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ.

ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್‌ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರಿ ಸಿಐಡಿ ತನಿಖೆಗೆ ವಹಿಸಿತ್ತು. ಖಾಸಗಿ ಗನ್‌ಮ್ಯಾನ್‌ಗಳಾದ ಬಲ್ಜಿತ್‌ ಸಿಂಗ್‌ ಹಾಗೂ ಬಲ್ಜಿನಂರ್‌ ಸಿಂಗ್‌ ಎಂಬುವವರನ್ನು ಬ್ರೂಸ್‌ ಪೇಟೆ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ವಿವರ: ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜನವರಿ.01ರಂದು ಬ್ಯಾನರ್‌ ಹರಿದ ವಿಚಾರವಾಗಿ ಭಾರೀ ಗಲಾಟೆ ನಡೆದಿತ್ತು. ಈ ವೇಳೆ ಫೈರಿಂಗ್‌ ಮಾಡಿದ ಪರಿಣಾಮ ಓರ್ವ ಕಾರ್ಯಕರ್ತೆ ರಾಜಶೇಖರ್‌ ರೆಡ್ಡಿ ಬಲಿಯಾಗಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

5 mins ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

10 mins ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

8 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

9 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

9 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

9 hours ago