ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಪೂರ್ವ ನಿಯೋಜಿತವಾಗಿದ್ದು, ಮೃತನ ಶವ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ. ಎರಡನೇ ಬಾರಿ ಯಾರ ಒತ್ತಡಕ್ಕೆ ಶವ ಪರೀಕ್ಷೆ ಮಾಡಿದ್ದಾರೆ? ಶವ ಪರೀಕ್ಷೆ ಮಾಡಲು ಅನುಮತಿ ಕೊಟ್ಟವರು ಯಾರು? ಯಾರ ಒತ್ತಡಕೆ ಮಣಿದು ಶವ ಪರೀಕ್ಷೆ ಮಾಡಿದ್ದಾರೆ? ಈ ಪ್ರಕರಣದ ತನಿಖೆಯ ಬಗ್ಗೆ ಅನುಮಾನವಿದ್ದು, ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.
ಜನಾರ್ಧನ ರೆಡ್ಡಿ ಮೇಲೆ ಆರೋಪ ಹೊರಿಸಲೆಂದೇ ಎರಡನೇ ಬಾರಿ ಶವ ಪರೀಕ್ಷೆ ಮಾಡಲಾಗಿದೆ. ಗುಂಡಿನ ದಾಳಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ? ಇಲ್ಲಾ ಸತ್ತು ಹೋಗಿದೆಯಾ? ಎಂದು ಕಿಡಿಕಾರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…