ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ ಹೊರಡಿಸಿದ್ದಾರೆ.
ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಆದೇಶ ಮಾಡಿದ್ದಾರೆ.
ಈ ಹಿಂದಿನ ಆದೇಶದಲ್ಲಿ ಕಾನೂನಾತ್ಮಕ ತೊಂದರೆ ಇದೆ, ಕಾನೂನು ಪಾಲನೆಯಾಗಿಲ್ಲ ಎಂಬ ಕೊರತೆ ಇದ್ದುದನ್ನು ಸರಿಪಡಿಸಿ ಸ್ಟೆಲ್ಲಾ ವರ್ಗೀಸ್ ಮತ್ತೊಮ್ಮೆ ಆದೇಶ ಮಾಡಿದ್ದಾರೆ.





