ರಾಜ್ಯ

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ಬೆಂಗಳೂರಿನ ಬಹುಪಾಲು ಜನರು ಶೀತ, ನೆಗಡಿ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಈಗ ಆರಂಭವಾಗಿರುವ ಚಳಿಗಾಲದ ಶೀತ ಎಂದು ಹಲವರು ಅಂದುಕೊಂಡಿದ್ದಾರೆ. ಆದರೆ ಹೆಚ್ಚಿನ ಜನರ ಆನಾರೋಗ್ಯ ಸಮಸ್ಯೆಗೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿತ ಪ್ರಮುಖ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟದ್ದಾರೆ.

ಬೆಂಗಳೂರು ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಕ್ಕಿಂತ ನೈಟ್ರೋಜನ್‌ ಆಕ್ಸೈಡ್‌(NO2) ದುಪ್ಪಟ್ಟು ಹೆಚ್ಚಾಗಿದೆ. ಇದು ಜನರ ಆರೋಗ್ಯದ ಸಮಸ್ಯೆ ಮೇಲೆ ಪರಿಣಾಮ ಬೀರಿದೆ. ಅದರಲ್ಲೂ ಬೆಂಗಳೂರಿನ ಮೆಜೆಸ್ಟಿಕ್‌ ಅತಿ ಹೆಚ್ಚು ಮಲೀನಗೊಂಡಿರುವ ಪ್ರದೇಶವೆಂದು ʼತಜ್ಞರ ವರದಿಯಿಂದ ಬಹಿರಂಗವಾಗಿದೆ.

ಡಬ್ಲ್ಯೂಟಿಎ ಮಾನದಂಡದ ಪ್ರಕಾರ, ವರ್ಷದ 365 ದಿನಗಳಲ್ಲೂ ಪ್ರತಿ ಘನ ಮೀಟರ್‌ಗೆ ಸರಾಸರಿ 10 ಮೈಕ್ರೋಗ್ರಾಂನಷ್ಟು ನೈಟ್ರೋಜನ್‌ ಡೈ ಆಕ್ಸೈಡ್‌ ಇದ್ದರೆ ಗಾಳಿಯ ಗುಣಮಟ್ಟ ಶುದ್ಧವಾಗಿದೆ ಎಂದರ್ಥ. ಆದರೆ ಬೆಂಗಳೂರಿನಲ್ಲಿ 2023ರಲ್ಲಿ 365 ದಿನಗಳ ಪೈಕಿ 295 ದಿನಗಳಲ್ಲಿ ನೈಟ್ರೋಜನ್‌ ಮಟ್ಟ ಮೀರಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ನೈಟ್ರೋಜನ್‌ ಡೈ ಆಕ್ಸೈಡ್‌ 20ಮೈಕ್ರೋಗ್ರಾಂಗಿಂತ ಹೆಚ್ಚಾಗಿ ಕಂಡುಬಂದಿದೆ. ನಗರದಲ್ಲಿ ಪರೀಕ್ಷಿಸಿದ 13 ಕೇಂದ್ರಗಳ ಪೈಕಿ 8 ಕೇಂದ್ರಗಳಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್‌ ಮಟ್ಟ 20 ಮೈಕ್ರೋಗ್ರಾಂಗಿಂತಲೂ ಹೆಚ್ಚಿದೆ. ಶಿವಪುರ ಕೇಂದ್ರದಲ್ಲಿ 15 ಮೈಕ್ರೋಗ್ರಾಂಗಳಷ್ಟು ಕಂಡುಬಂದಿದ್ದರೆ, ಉಳಿದ ನಾಲ್ಕು ಕೇಂದ್ರಗಳಲ್ಲಿ 10 ರಿಂದ 13 ಮೈಕ್ರೋಗ್ರಾಂಗಳಷ್ಟು ಇರುವುದಾಗಿ ವರದಿಯಾಗಿದೆ.

ಭಾರತದಲ್ಲಿ ದೆಹಲಿ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟ ಹೊಂದಿರುವ ಪ್ರದೇಶಗಳಲ್ಲಿ ಮೊದಲ ಸ್ಥಾನ ಹೊಂದಿದ್ದು, ಉಳಿದಂತೆ ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್‌, ಹಾಗೂ ಚೆನ್ನೈನಲ್ಲಿಯೂ ನೈಟ್ರೋಜನ್‌ ಡೈ ಆಕ್ಸೈಡ್‌ ಮಟ್ಟ ಹೆಚ್ಚಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

9 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

13 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

15 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

23 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

36 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

42 mins ago