ರಾಜ್ಯ

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ಬೆಂಗಳೂರಿನ ಬಹುಪಾಲು ಜನರು ಶೀತ, ನೆಗಡಿ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಈಗ ಆರಂಭವಾಗಿರುವ ಚಳಿಗಾಲದ ಶೀತ ಎಂದು ಹಲವರು ಅಂದುಕೊಂಡಿದ್ದಾರೆ. ಆದರೆ ಹೆಚ್ಚಿನ ಜನರ ಆನಾರೋಗ್ಯ ಸಮಸ್ಯೆಗೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿತ ಪ್ರಮುಖ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟದ್ದಾರೆ.

ಬೆಂಗಳೂರು ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಕ್ಕಿಂತ ನೈಟ್ರೋಜನ್‌ ಆಕ್ಸೈಡ್‌(NO2) ದುಪ್ಪಟ್ಟು ಹೆಚ್ಚಾಗಿದೆ. ಇದು ಜನರ ಆರೋಗ್ಯದ ಸಮಸ್ಯೆ ಮೇಲೆ ಪರಿಣಾಮ ಬೀರಿದೆ. ಅದರಲ್ಲೂ ಬೆಂಗಳೂರಿನ ಮೆಜೆಸ್ಟಿಕ್‌ ಅತಿ ಹೆಚ್ಚು ಮಲೀನಗೊಂಡಿರುವ ಪ್ರದೇಶವೆಂದು ʼತಜ್ಞರ ವರದಿಯಿಂದ ಬಹಿರಂಗವಾಗಿದೆ.

ಡಬ್ಲ್ಯೂಟಿಎ ಮಾನದಂಡದ ಪ್ರಕಾರ, ವರ್ಷದ 365 ದಿನಗಳಲ್ಲೂ ಪ್ರತಿ ಘನ ಮೀಟರ್‌ಗೆ ಸರಾಸರಿ 10 ಮೈಕ್ರೋಗ್ರಾಂನಷ್ಟು ನೈಟ್ರೋಜನ್‌ ಡೈ ಆಕ್ಸೈಡ್‌ ಇದ್ದರೆ ಗಾಳಿಯ ಗುಣಮಟ್ಟ ಶುದ್ಧವಾಗಿದೆ ಎಂದರ್ಥ. ಆದರೆ ಬೆಂಗಳೂರಿನಲ್ಲಿ 2023ರಲ್ಲಿ 365 ದಿನಗಳ ಪೈಕಿ 295 ದಿನಗಳಲ್ಲಿ ನೈಟ್ರೋಜನ್‌ ಮಟ್ಟ ಮೀರಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ನೈಟ್ರೋಜನ್‌ ಡೈ ಆಕ್ಸೈಡ್‌ 20ಮೈಕ್ರೋಗ್ರಾಂಗಿಂತ ಹೆಚ್ಚಾಗಿ ಕಂಡುಬಂದಿದೆ. ನಗರದಲ್ಲಿ ಪರೀಕ್ಷಿಸಿದ 13 ಕೇಂದ್ರಗಳ ಪೈಕಿ 8 ಕೇಂದ್ರಗಳಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್‌ ಮಟ್ಟ 20 ಮೈಕ್ರೋಗ್ರಾಂಗಿಂತಲೂ ಹೆಚ್ಚಿದೆ. ಶಿವಪುರ ಕೇಂದ್ರದಲ್ಲಿ 15 ಮೈಕ್ರೋಗ್ರಾಂಗಳಷ್ಟು ಕಂಡುಬಂದಿದ್ದರೆ, ಉಳಿದ ನಾಲ್ಕು ಕೇಂದ್ರಗಳಲ್ಲಿ 10 ರಿಂದ 13 ಮೈಕ್ರೋಗ್ರಾಂಗಳಷ್ಟು ಇರುವುದಾಗಿ ವರದಿಯಾಗಿದೆ.

ಭಾರತದಲ್ಲಿ ದೆಹಲಿ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟ ಹೊಂದಿರುವ ಪ್ರದೇಶಗಳಲ್ಲಿ ಮೊದಲ ಸ್ಥಾನ ಹೊಂದಿದ್ದು, ಉಳಿದಂತೆ ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್‌, ಹಾಗೂ ಚೆನ್ನೈನಲ್ಲಿಯೂ ನೈಟ್ರೋಜನ್‌ ಡೈ ಆಕ್ಸೈಡ್‌ ಮಟ್ಟ ಹೆಚ್ಚಾಗಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago