ರಾಜ್ಯ

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ಬೆಂಗಳೂರಿನ ಬಹುಪಾಲು ಜನರು ಶೀತ, ನೆಗಡಿ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಈಗ ಆರಂಭವಾಗಿರುವ ಚಳಿಗಾಲದ ಶೀತ ಎಂದು ಹಲವರು ಅಂದುಕೊಂಡಿದ್ದಾರೆ. ಆದರೆ ಹೆಚ್ಚಿನ ಜನರ ಆನಾರೋಗ್ಯ ಸಮಸ್ಯೆಗೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿತ ಪ್ರಮುಖ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟದ್ದಾರೆ.

ಬೆಂಗಳೂರು ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಕ್ಕಿಂತ ನೈಟ್ರೋಜನ್‌ ಆಕ್ಸೈಡ್‌(NO2) ದುಪ್ಪಟ್ಟು ಹೆಚ್ಚಾಗಿದೆ. ಇದು ಜನರ ಆರೋಗ್ಯದ ಸಮಸ್ಯೆ ಮೇಲೆ ಪರಿಣಾಮ ಬೀರಿದೆ. ಅದರಲ್ಲೂ ಬೆಂಗಳೂರಿನ ಮೆಜೆಸ್ಟಿಕ್‌ ಅತಿ ಹೆಚ್ಚು ಮಲೀನಗೊಂಡಿರುವ ಪ್ರದೇಶವೆಂದು ʼತಜ್ಞರ ವರದಿಯಿಂದ ಬಹಿರಂಗವಾಗಿದೆ.

ಡಬ್ಲ್ಯೂಟಿಎ ಮಾನದಂಡದ ಪ್ರಕಾರ, ವರ್ಷದ 365 ದಿನಗಳಲ್ಲೂ ಪ್ರತಿ ಘನ ಮೀಟರ್‌ಗೆ ಸರಾಸರಿ 10 ಮೈಕ್ರೋಗ್ರಾಂನಷ್ಟು ನೈಟ್ರೋಜನ್‌ ಡೈ ಆಕ್ಸೈಡ್‌ ಇದ್ದರೆ ಗಾಳಿಯ ಗುಣಮಟ್ಟ ಶುದ್ಧವಾಗಿದೆ ಎಂದರ್ಥ. ಆದರೆ ಬೆಂಗಳೂರಿನಲ್ಲಿ 2023ರಲ್ಲಿ 365 ದಿನಗಳ ಪೈಕಿ 295 ದಿನಗಳಲ್ಲಿ ನೈಟ್ರೋಜನ್‌ ಮಟ್ಟ ಮೀರಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ನೈಟ್ರೋಜನ್‌ ಡೈ ಆಕ್ಸೈಡ್‌ 20ಮೈಕ್ರೋಗ್ರಾಂಗಿಂತ ಹೆಚ್ಚಾಗಿ ಕಂಡುಬಂದಿದೆ. ನಗರದಲ್ಲಿ ಪರೀಕ್ಷಿಸಿದ 13 ಕೇಂದ್ರಗಳ ಪೈಕಿ 8 ಕೇಂದ್ರಗಳಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್‌ ಮಟ್ಟ 20 ಮೈಕ್ರೋಗ್ರಾಂಗಿಂತಲೂ ಹೆಚ್ಚಿದೆ. ಶಿವಪುರ ಕೇಂದ್ರದಲ್ಲಿ 15 ಮೈಕ್ರೋಗ್ರಾಂಗಳಷ್ಟು ಕಂಡುಬಂದಿದ್ದರೆ, ಉಳಿದ ನಾಲ್ಕು ಕೇಂದ್ರಗಳಲ್ಲಿ 10 ರಿಂದ 13 ಮೈಕ್ರೋಗ್ರಾಂಗಳಷ್ಟು ಇರುವುದಾಗಿ ವರದಿಯಾಗಿದೆ.

ಭಾರತದಲ್ಲಿ ದೆಹಲಿ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟ ಹೊಂದಿರುವ ಪ್ರದೇಶಗಳಲ್ಲಿ ಮೊದಲ ಸ್ಥಾನ ಹೊಂದಿದ್ದು, ಉಳಿದಂತೆ ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್‌, ಹಾಗೂ ಚೆನ್ನೈನಲ್ಲಿಯೂ ನೈಟ್ರೋಜನ್‌ ಡೈ ಆಕ್ಸೈಡ್‌ ಮಟ್ಟ ಹೆಚ್ಚಾಗಿದೆ.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

56 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago