ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ.21ರಂದು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.
ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಇನ್ನು ವೈಟ್ ಫೀಲ್ಡ್ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂಗಳ ಪರಿಹಾರವನ್ನು ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇನ್ನು ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…