ರಾಜ್ಯ

ಟ್ರಾಫಿಕ್‌ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

7 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

11 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 hours ago