ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ.
ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್ ಈ ಕೃತ್ಯವೆಸಗಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು.
ಇದನ್ನೂ ಓದಿ:-ಜಾನುವಾರಕ್ಕೆ ಮೇವು ಕತ್ತರಿಸುವಾಗ ವಿದ್ಯುತ್ ಸ್ಪರ್ಶ : ರೈತ ಸಾವು
ಈ ವೇಳೆ ಜಯದೇವ ಡೇರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನ ತಡೆದು ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…