ರಾಜ್ಯ

ಬೆಂಗಳೂರು: ಮತ್ತೇರಿಸುವ ಔಷಧಿ ನೀಡಿ ಯುವತಿ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ

ಬೆಂಗಳೂರು: ಯುವತಿಗೆ ಮತ್ತೇರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ವಿಡಿಯೊ ಚಿತ್ರೀಕರಣ ಮಾಡಿಕೊಂಡು ಬೆದರಿಸಿ, ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಇಲ್ಲಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿ ಆಗಿರುವ 26 ವರ್ಷದ ಯುವತಿ, 2019 ರಲ್ಲಿ ಆರ್.ಟಿ ನಗರದ ಖಾಸಗಿ ಬ್ಯಾಂಕ್‌ವೊಂದರ ಕ್ರಿಡಿಟ್‌ ಕಾರ್ಡ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಆರೋಪಿ ಲಕ್ಷ್ಮೀರೆಡ್ಡಿಯ ಪರಿಚಯವಾಗಿತ್ತು.

ಆಂಧ್ರಪ್ರದೇಶ ಮೂಲದ ಆರೋಪಿ ಲಕ್ಷ್ಮೀರೆಡ್ಡಿ, 2019ರ ನವೆಂಬರ್‌ನಲ್ಲಿ ತನ್ನ ಸಹೋದರಿಯ ಹುಟ್ಟುಹಬ್ಬದ ಕಾರ್ಯಕ್ರಮವಿದೆ ಎಂದು ಆರ್.ಟಿ ನಗರದ ರೆಸಿಡೆನ್ಸಿಯೊಂದಕ್ಕೆ ಆಹ್ವಾನ ನೀಡಿ, ಚಹಾದಲ್ಲಿ ಮತ್ತು ಬರುವ ಔಷಧಿ ಬೆರಸಿ, ಕುಡಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ಕೃತ್ಯದ ವಿಡಿಯೊ ಚಿತ್ರೀಕರಿಸಿಕೊಂಡಿದ್ದ ಆರೋಪಿ, ನಂತರದ ದಿನಗಳಲ್ಲಿ ತನಗೆ ಬೆದರಿಸಿ ನಿರಂತರವಾಗಿ ಲೈಂಗಿನ ಶೋಷಣೆಗೈದಿದ್ದಾನೆ. ತನ್ನ ಜಾತಿ ಹಾಗೂ ತಾಯಿಯ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದು, ಯುವತಿ ಮನೆಯಲ್ಲಿದ್ದ ಅಂಬೇಡ್ಕರ್‌ ಅವರ ಫೋಟೋ ತೆಗೆದು ಹಾಕುವಂತೆ ಕಿರುಕುಳ ನೀಡಿದ್ದಾನೆ. ಮೊಬೈಲ್‌ ಫೋನಿನ ವಾಲ್‌ಪೇಪರ್‌ನಲ್ಲಿದ್ದ ಅಂಬೇಡ್ಕರ್‌ ಅವರ ಫೋಟೊ ತೆಗೆದುಹಾಕುವಂತೆ ಬೆದರಿಸಿ ಮೊಬೈಲ್‌ ಒಡೆದು ಹಾಕಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಹರಿದುಹಾಕಿ ಸಾಯಿಸುತ್ತೇನೆ ಎಂದು ಬೆದರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತ ಯವತಿ ದೂರು ನೀಡುತ್ತದ್ದಂತೆ ಆರೋಪಿ ಮೊಬೈಲ್‌ ಫೋನ್‌ ಸ್ವಿಷ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

11 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

19 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

19 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

24 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

24 hours ago