ಬೆಂಗಳೂರು: ಯುವತಿಗೆ ಮತ್ತೇರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ವಿಡಿಯೊ ಚಿತ್ರೀಕರಣ ಮಾಡಿಕೊಂಡು ಬೆದರಿಸಿ, ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿ ಆಗಿರುವ 26 ವರ್ಷದ ಯುವತಿ, 2019 ರಲ್ಲಿ ಆರ್.ಟಿ ನಗರದ ಖಾಸಗಿ ಬ್ಯಾಂಕ್ವೊಂದರ ಕ್ರಿಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಆರೋಪಿ ಲಕ್ಷ್ಮೀರೆಡ್ಡಿಯ ಪರಿಚಯವಾಗಿತ್ತು.
ಆಂಧ್ರಪ್ರದೇಶ ಮೂಲದ ಆರೋಪಿ ಲಕ್ಷ್ಮೀರೆಡ್ಡಿ, 2019ರ ನವೆಂಬರ್ನಲ್ಲಿ ತನ್ನ ಸಹೋದರಿಯ ಹುಟ್ಟುಹಬ್ಬದ ಕಾರ್ಯಕ್ರಮವಿದೆ ಎಂದು ಆರ್.ಟಿ ನಗರದ ರೆಸಿಡೆನ್ಸಿಯೊಂದಕ್ಕೆ ಆಹ್ವಾನ ನೀಡಿ, ಚಹಾದಲ್ಲಿ ಮತ್ತು ಬರುವ ಔಷಧಿ ಬೆರಸಿ, ಕುಡಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಕೃತ್ಯದ ವಿಡಿಯೊ ಚಿತ್ರೀಕರಿಸಿಕೊಂಡಿದ್ದ ಆರೋಪಿ, ನಂತರದ ದಿನಗಳಲ್ಲಿ ತನಗೆ ಬೆದರಿಸಿ ನಿರಂತರವಾಗಿ ಲೈಂಗಿನ ಶೋಷಣೆಗೈದಿದ್ದಾನೆ. ತನ್ನ ಜಾತಿ ಹಾಗೂ ತಾಯಿಯ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದು, ಯುವತಿ ಮನೆಯಲ್ಲಿದ್ದ ಅಂಬೇಡ್ಕರ್ ಅವರ ಫೋಟೋ ತೆಗೆದು ಹಾಕುವಂತೆ ಕಿರುಕುಳ ನೀಡಿದ್ದಾನೆ. ಮೊಬೈಲ್ ಫೋನಿನ ವಾಲ್ಪೇಪರ್ನಲ್ಲಿದ್ದ ಅಂಬೇಡ್ಕರ್ ಅವರ ಫೋಟೊ ತೆಗೆದುಹಾಕುವಂತೆ ಬೆದರಿಸಿ ಮೊಬೈಲ್ ಒಡೆದು ಹಾಕಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಹರಿದುಹಾಕಿ ಸಾಯಿಸುತ್ತೇನೆ ಎಂದು ಬೆದರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತ ಯವತಿ ದೂರು ನೀಡುತ್ತದ್ದಂತೆ ಆರೋಪಿ ಮೊಬೈಲ್ ಫೋನ್ ಸ್ವಿಷ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…