ಬೆಂಗಳೂರು: ಖಾಲಿ ಸೈಟ್ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ.
ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ(ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಯ ಜಾಗದ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡಲು ಮುಂದಾದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಹೃದಯಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೇಸರಿನಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಜಾಗದಲ್ಲಿ ಸಿವಿಲ್ ಡಿಸ್ಪ್ಯೂಟ್ ಕೂಡ ಇದೆ. ಈ ನಡುವೆ ಎಸ್ಪಿ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿಕೊಂಡು ಸದ್ದಿಲ್ಲದೇ ಮಾರಾಟ ಮಾಡಲು ಯತ್ನಿಸಿದ್ದಾರೆ.
ಜೂನ್ ೩ ರಂದು ಅನಧಿಕೃತವಾಗಿ ಎಸ್ಪಿ ಕಚೇರಿ ಪ್ರವೇಶಿಸಿದ ಹನೀಫ್ ಕಚೇರಿಯ ಫೋಟೊ ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಕಳುಹಿಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಇದ್ದ ಇನ್ ಸ್ಪೆಕ್ಟರ್ ಸಂತೋಷ ಪ್ರಶ್ನಿಸಿ ಯಾರು ನೀವು? ಹೊರಗೆ ಹೋಗಿ ವಿಡಿಯೋ ಮಾಡಿ ಎಂದಿದ್ದಾರೆ. ಈ ವೇಳೆ ಹನೀಫ್ ಈ ಜಾಗದ ದಾಖಲಾತಿಗಳು ನಮ್ಮ ಬಳಿ ಇವೆ. ಅಸಲಿಗೆ ಈ ಜಾಗ ಮೋಹನ್ಶೆಟ್ಟಿ ಹಾಗೂ ರಾಜಶೇಖರ್ ಅವರ ಹೆಸರಿನಲ್ಲಿದೆ. ಈ ಜಾಗದ ಜಿಪಿಎ ನನ್ನ ಹೆಸರಿಗೆ ಇದೆ ಎಂದು ಹೇಳಿದ್ದಾನೆ.
ಇದರಿಂದ ಆತಂಕಕ್ಕೆ ಒಳಗಾದ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಹಿರಿಯ ಅಧಿಕಾರಿಗಳು ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಠಿಸಿದ ರಾಜಶೇಜರ್, ಮೊಹಮದ್ ನದೀಮ್, ಗಣಪತಿ ಹಾಗೂ ಮೋಹನ್ ಶೆಟ್ಟಿ ಎಂಬುವವರ ಮೇಲೆ ದೂರು ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…
ಮೈಸೂರಿನ ಎಲ್ಲ ವಾರ್ಡ್ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ…
ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ…
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…