ರಾಜ್ಯ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಎಸ್‌ಪಿ ಕಚೇರಿಯನ್ನೇ ಮಾರಾಟ ಮಾಡಲು ಯತ್ನ; ಆರೋಪಿಗಳ ಬಂಧನ

ಬೆಂಗಳೂರು: ಖಾಲಿ ಸೈಟ್‌ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ.

ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ(ಪೊಲೀಸ್‌ ವರಿಷ್ಠಾಧಿಕಾರಿ) ಕಚೇರಿಯ ಜಾಗದ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡಲು ಮುಂದಾದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಹೃದಯಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೇಸರಿನಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಜಾಗದಲ್ಲಿ ಸಿವಿಲ್‌ ಡಿಸ್‌ಪ್ಯೂಟ್‌ ಕೂಡ ಇದೆ. ಈ ನಡುವೆ ಎಸ್‌ಪಿ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿಕೊಂಡು ಸದ್ದಿಲ್ಲದೇ ಮಾರಾಟ ಮಾಡಲು ಯತ್ನಿಸಿದ್ದಾರೆ.

ಜೂನ್‌ ೩ ರಂದು ಅನಧಿಕೃತವಾಗಿ ಎಸ್ಪಿ ಕಚೇರಿ ಪ್ರವೇಶಿಸಿದ ಹನೀಫ್‌ ಕಚೇರಿಯ ಫೋಟೊ ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಕಳುಹಿಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಇದ್ದ ಇನ್‌ ಸ್ಪೆಕ್ಟರ್ ಸಂತೋಷ ಪ್ರಶ್ನಿಸಿ ಯಾರು ನೀವು? ಹೊರಗೆ ಹೋಗಿ ವಿಡಿಯೋ ಮಾಡಿ ಎಂದಿದ್ದಾರೆ. ಈ ವೇಳೆ ಹನೀಫ್‌ ಈ ಜಾಗದ ದಾಖಲಾತಿಗಳು ನಮ್ಮ ಬಳಿ ಇವೆ. ಅಸಲಿಗೆ ಈ ಜಾಗ ಮೋಹನ್‌ಶೆಟ್ಟಿ ಹಾಗೂ ರಾಜಶೇಖರ್‌ ಅವರ ಹೆಸರಿನಲ್ಲಿದೆ. ಈ ಜಾಗದ ಜಿಪಿಎ ನನ್ನ ಹೆಸರಿಗೆ ಇದೆ ಎಂದು ಹೇಳಿದ್ದಾನೆ.

ಇದರಿಂದ ಆತಂಕಕ್ಕೆ ಒಳಗಾದ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂತೋಷ್‌ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಹಿರಿಯ ಅಧಿಕಾರಿಗಳು ಹನೀಫ್‌ ಸೇರಿದಂತೆ ನಕಲಿ ದಾಖಲೆ ಸೃಷ್ಠಿಸಿದ ರಾಜಶೇಜರ್‌, ಮೊಹಮದ್‌ ನದೀಮ್‌, ಗಣಪತಿ ಹಾಗೂ ಮೋಹನ್‌ ಶೆಟ್ಟಿ ಎಂಬುವವರ ಮೇಲೆ ದೂರು ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

1 hour ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

1 hour ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

1 hour ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

1 hour ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

10 hours ago