ಬೆಂಗಳೂರು: ಖಾಲಿ ಸೈಟ್ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ.
ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ(ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಯ ಜಾಗದ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡಲು ಮುಂದಾದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಹೃದಯಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೇಸರಿನಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಜಾಗದಲ್ಲಿ ಸಿವಿಲ್ ಡಿಸ್ಪ್ಯೂಟ್ ಕೂಡ ಇದೆ. ಈ ನಡುವೆ ಎಸ್ಪಿ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿಕೊಂಡು ಸದ್ದಿಲ್ಲದೇ ಮಾರಾಟ ಮಾಡಲು ಯತ್ನಿಸಿದ್ದಾರೆ.
ಜೂನ್ ೩ ರಂದು ಅನಧಿಕೃತವಾಗಿ ಎಸ್ಪಿ ಕಚೇರಿ ಪ್ರವೇಶಿಸಿದ ಹನೀಫ್ ಕಚೇರಿಯ ಫೋಟೊ ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಕಳುಹಿಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಇದ್ದ ಇನ್ ಸ್ಪೆಕ್ಟರ್ ಸಂತೋಷ ಪ್ರಶ್ನಿಸಿ ಯಾರು ನೀವು? ಹೊರಗೆ ಹೋಗಿ ವಿಡಿಯೋ ಮಾಡಿ ಎಂದಿದ್ದಾರೆ. ಈ ವೇಳೆ ಹನೀಫ್ ಈ ಜಾಗದ ದಾಖಲಾತಿಗಳು ನಮ್ಮ ಬಳಿ ಇವೆ. ಅಸಲಿಗೆ ಈ ಜಾಗ ಮೋಹನ್ಶೆಟ್ಟಿ ಹಾಗೂ ರಾಜಶೇಖರ್ ಅವರ ಹೆಸರಿನಲ್ಲಿದೆ. ಈ ಜಾಗದ ಜಿಪಿಎ ನನ್ನ ಹೆಸರಿಗೆ ಇದೆ ಎಂದು ಹೇಳಿದ್ದಾನೆ.
ಇದರಿಂದ ಆತಂಕಕ್ಕೆ ಒಳಗಾದ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಹಿರಿಯ ಅಧಿಕಾರಿಗಳು ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಠಿಸಿದ ರಾಜಶೇಜರ್, ಮೊಹಮದ್ ನದೀಮ್, ಗಣಪತಿ ಹಾಗೂ ಮೋಹನ್ ಶೆಟ್ಟಿ ಎಂಬುವವರ ಮೇಲೆ ದೂರು ದಾಖಲಿಸಿ, ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…