ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯೂರ್ತಿ ವೀರಪ್ಪ ಅವರು ಬೀದರ್ ಉಪವಿಭಾಗಾಧಿಕಾರಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ
ಬೀದರ್ ತಾಲ್ಲೂಕಿನ ಬೊಂಬಳಗಿ ಗ್ರಾಮದ ಸಂಜೀವ ಕುಮಾರ್ (48) ಅವರು ಜ.14ರಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 65ರ ನಿರ್ಣಾ ಕ್ರಾಸ್ ಬಳಿ ಗಾಳಿಪಟಹಾರಿಸಲು ಬಳಸಿದ್ದ ಮಾಂಜಾ ದಾರ ಕತ್ತು ಸೀಳಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಈ ಬಗ್ಗೆ ಮನ್ನಾ ಎಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ರಾಜ್ಯಮಟ್ಟದ ಕನ್ನಡ ದಿನ ಪತ್ರಿಕೆ ಹಾಗೂ ರಾಷ್ಟ್ರ ಮಟ್ಟದ ಇಂಗ್ಲಿಷ್ ಇಂಗ್ಲಿಷ್ ದಿನ ಪತ್ರಿಕೆಯಲ್ಲಿ ಗಾಳಿ ಪಟಕ್ಕೆ ಬಳಸುವ ಮಾಂಜಾ ದಾರರಿಂದ ಆಗುವ ಅನಾಹಿತದ ಬಗ್ಗೆ ವರದಿ ಪ್ರಕಟವಾಗಿತ್ತು.
ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಬೀದರ್ ಉಪವಿಭಾಗಾಧಿಕಾರಿ ಮಹಮದ್ ಶಕೀಲ್, ಬಸವಕಲ್ಯಾಣ ಉಪವಿಭಾಗಾಧಿಕಾರಿ ಪ್ರಕಾಶ್ ಕುದರಿ, ಮನ್ನಾಏಖೇಳ್ಳಿ ಆರಕ್ಷಕ ಉಪ ನಿರೀಕ್ಷಕ ಮಹೇಂದ್ರ ಕುಮಾರ್, ಚಿಟಗುಪ್ಪಾ ವೃತ್ತ ನಿರೀಕ್ಷಕ ಶೀನಿವಾಸ ಅಲ್ಲಾಪುರ, ಹುಮನಾಬಾದ್ ಆರಕ್ಷಕ ಉಪಾಧಿಕ್ಷಕ ಮಾಡೋಳಪ್ಪಾ ಹಾಗೂ ಚಿಟಗುಪ್ಪಾ ತಹಸಿಲ್ದಾರ್ ಮಂಜುನಾಥ ಪಂಚಾಳ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದ್ದಾರೆ.
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…