ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯೂರ್ತಿ ವೀರಪ್ಪ ಅವರು ಬೀದರ್ ಉಪವಿಭಾಗಾಧಿಕಾರಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ
ಬೀದರ್ ತಾಲ್ಲೂಕಿನ ಬೊಂಬಳಗಿ ಗ್ರಾಮದ ಸಂಜೀವ ಕುಮಾರ್ (48) ಅವರು ಜ.14ರಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 65ರ ನಿರ್ಣಾ ಕ್ರಾಸ್ ಬಳಿ ಗಾಳಿಪಟಹಾರಿಸಲು ಬಳಸಿದ್ದ ಮಾಂಜಾ ದಾರ ಕತ್ತು ಸೀಳಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಈ ಬಗ್ಗೆ ಮನ್ನಾ ಎಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ರಾಜ್ಯಮಟ್ಟದ ಕನ್ನಡ ದಿನ ಪತ್ರಿಕೆ ಹಾಗೂ ರಾಷ್ಟ್ರ ಮಟ್ಟದ ಇಂಗ್ಲಿಷ್ ಇಂಗ್ಲಿಷ್ ದಿನ ಪತ್ರಿಕೆಯಲ್ಲಿ ಗಾಳಿ ಪಟಕ್ಕೆ ಬಳಸುವ ಮಾಂಜಾ ದಾರರಿಂದ ಆಗುವ ಅನಾಹಿತದ ಬಗ್ಗೆ ವರದಿ ಪ್ರಕಟವಾಗಿತ್ತು.
ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಬೀದರ್ ಉಪವಿಭಾಗಾಧಿಕಾರಿ ಮಹಮದ್ ಶಕೀಲ್, ಬಸವಕಲ್ಯಾಣ ಉಪವಿಭಾಗಾಧಿಕಾರಿ ಪ್ರಕಾಶ್ ಕುದರಿ, ಮನ್ನಾಏಖೇಳ್ಳಿ ಆರಕ್ಷಕ ಉಪ ನಿರೀಕ್ಷಕ ಮಹೇಂದ್ರ ಕುಮಾರ್, ಚಿಟಗುಪ್ಪಾ ವೃತ್ತ ನಿರೀಕ್ಷಕ ಶೀನಿವಾಸ ಅಲ್ಲಾಪುರ, ಹುಮನಾಬಾದ್ ಆರಕ್ಷಕ ಉಪಾಧಿಕ್ಷಕ ಮಾಡೋಳಪ್ಪಾ ಹಾಗೂ ಚಿಟಗುಪ್ಪಾ ತಹಸಿಲ್ದಾರ್ ಮಂಜುನಾಥ ಪಂಚಾಳ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…