ರಾಜ್ಯ

ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು

ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್‌ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ.

2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ್ದ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಈ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಮತ್ತು ಧಾರ್ಮಿಕ ಸಂಘಟನೆಗಳು ಕೂಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ಪರಮೇಶ್ ಉದಯನಿಧಿ ಸ್ಟಾಲಿನ್ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ನೋಟಿಸ್ ಜಾರಿ ಮಾಡಿದ ನಂತರ ಉದಯನಿಧಿ ಸ್ಟಾಲಿನ್ ಹಾಜರಾಗಿದ್ದರು. ತಮಿಳುನಾಡಿನ ಕ್ರೀಡಾ ಮತ್ತು ಯುವ ವ್ಯವಹಾರಗಳ ಖಾತೆ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ 1 ಲಕ್ಷ ರೂ.ಗಳ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 8ರಂದು ನಡೆಯಲಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

3 mins ago

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

1 hour ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

2 hours ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

2 hours ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

3 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

4 hours ago