ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ.
2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ್ದ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಈ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಮತ್ತು ಧಾರ್ಮಿಕ ಸಂಘಟನೆಗಳು ಕೂಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ಪರಮೇಶ್ ಉದಯನಿಧಿ ಸ್ಟಾಲಿನ್ ವಿರುದ್ಧ ಅರ್ಜಿ ಸಲ್ಲಿಸಿದ್ದರು.
ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ನೋಟಿಸ್ ಜಾರಿ ಮಾಡಿದ ನಂತರ ಉದಯನಿಧಿ ಸ್ಟಾಲಿನ್ ಹಾಜರಾಗಿದ್ದರು. ತಮಿಳುನಾಡಿನ ಕ್ರೀಡಾ ಮತ್ತು ಯುವ ವ್ಯವಹಾರಗಳ ಖಾತೆ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ 1 ಲಕ್ಷ ರೂ.ಗಳ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 8ರಂದು ನಡೆಯಲಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…