ರಾಜ್ಯ

ಒಂದು ಮುತ್ತಿಗೆ 50 ಸಾವಿರ ; ಖತರ್ನಾಕ್‌ ಶಿಕ್ಷಕಿ ಸೇರಿದಂತೆ ಹನಿಟ್ರ್ಯಾಪ್‌ ಗ್ಯಾಂಗ್‌ ಬಂಧನ

ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ ರೌಡಿಶೀಟರ್‌ ಗಣೇಶ್‌ ಕಾಳೆ. ಸಾಗರ್‌ ಮೋರೆ ಹಾಗು ಶೃತಿ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ: ಮಹಾಲಕ್ಷ್ಮಿ ಬಡಾವಣೆಯಲ್ಲಿ ಖಾಸಗಿ ಪ್ರೀಸ್ಕೂಲ್‌ ನಡೆಸುತ್ತಿದ್ದ ಆರೋಪಿ ಶೃತಿಗೆ 2023 ರಲ್ಲಿ ಉದ್ಯಮಿ ಪರಿಚಯವಾಗಿತ್ತು. ತನ್ನ ಮಕ್ಕಳನ್ನು ಈಕೆಯ ಪ್ಲೇಹೋಮ್‌ಗೆ ಕಳುಹಿಸುತ್ತಿದ್ದರು.

ಈ ವೇಳೆ ಸ್ನೇಹ ಬೆಳೆದು ಉದ್ಯಮಿಯಿಂದ ಶಾಲೆ ನಿರ್ವಹಣೆ ಸಲುವಾಗಿ ಆರೋಪಿ ಶಿಕ್ಷಕಿ 2 ಲಕ್ಷ ಸಾಲ ಪಡೆದಿದ್ದಳು. 2024ರಲ್ಲಿ ವಾಪಸ್‌‍ ಕೊಡುವುದಾಗಿ ತಿಳಿಸಿದ್ದಳು. ಹಣ ವಾಪಸ್‌‍ ಕೇಳಿದಾಗ ಶಾಲೆಯ ಪಾಲುದಾರಿಕೆ ಆಫರ್‌ ನೀಡಿ ತನ್ನ ಬಲೆಗೆ ಬೀಳಿಸಿಕೊಂಡಿದ್ದರು.
ಈ ವೇಳೆ ಇಬ್ಬರ ನಡುವೆ ಸಲುಗೆ ಬೆಳೆದು, ಹಲವೆಡೆ ಸುತ್ತಾಟ ನಡೆಸಿದ್ದರು.

ಆರಂಭದಲ್ಲಿ ಮೋಹಕದಾಟದಲ್ಲಿ ಒಂದು ಮುತ್ತಿಗೆ 50 ಸಾವಿರ ರೂ.ಪಡೆದಿದ್ದು ನಂತರ ಹನಿಟ್ರ್ಯಾಪ್‌ ಸಂಚು ಶುರುವಾಗಿತ್ತು. ಶಿಕ್ಷಕಿ ಜೊತೆ ರೌಡಿ ಸೇರಿಕೊಂಡಿದ್ದ. ಇದರ ನಡುವೆ ಉದ್ಯಮಿ ಹೊಸ ಸಿಮ್‌ ಖರೀದಿಸಿ ಪರಸ್ಪರ ಮಾತುಕತೆ ಮುಂದುವರಿದಿತ್ತು. ಜನವರಿ ಮೊದಲ ವಾರದಲ್ಲಿ ಹಣ ವಾಪಸ್‌‍ ಕೇಳಿದಾಗ, ನಿನಗೆ ಏನು ಬೇಕು ಕೇಳು ಕೊಡುತ್ತೇನೆ. ಹಣಕಾಸಿನ ವ್ಯವಹಾರ ಒಂದೇ ಸಲ ಮುಗಿಸಿಬಿಡೋಣ ಎಂದಿದ್ದಳು. ಈ ವೇಳೆ ಲಿವಿಂಗ್‌ ಇನ್‌ ರಿಲೇಶನ್‌ಷಿಪ್‌ ವಿಚಾರ ಪ್ರಸ್ತಾಪ ಮಾಡಿದ್ದಳು.

ಈ ವೇಳೆ ಮತ್ತೆ ಹದಿನೈದು ಲಕ್ಷ ಪಡೆದು ನಂತರ ಪದೇ ಪದೇ ಹಣಕ್ಕೆ ಬೇಡಿಕೆ ಶುರು ಮಾಡಿದ್ದಳು. ನಂತರ ಉದ್ಯಮಿ ಸಿಮ್‌ ಮುರಿದು ಬಿಸಾಕಿ ಸಂಬಂಧ ಕಡಿತಕ್ಕೆ ಮುಂದಾಗಿದ್ದರು. ಆದರೆ ಮಾರ್ಚ್‌ 12 ರಂದು ಉದ್ಯಮಿ ಪತ್ನಿಗೆ ಆರೋಪಿ ಶಿಕ್ಷಕಿ ಕರೆ ಮಾಡಿದ್ದಳು. ಮಕ್ಕಳ ಸ್ಕೂಲ್‌ ಟಿಸಿ ಕೊಡ್ತೇನೆ ನಿಮ್ಮ ಪತಿಯನ್ನ ಕಳಿಸಿ ಎಂದಿದ್ದಳು. ಅದರಂತೆ ಪ್ರೀಸ್ಕೂಲ್‌ಗೆ ಉದ್ಯಮಿ ತೆರಳಿದ್ದರು. ಪ್ರೀಸ್ಕೂಲ್‌ಗೆ ಬಂದಾಗ ಸಾಗರ್‌ ಮೋರೆ ಹಾಗೂ ಗಣೇಶ್‌ ಕಾಳೆ ಆರೋಪಿಗಳು ಇದ್ದರು.

ಸಾಗರ್‌ ಜೊತೆ ಶಿಕ್ಷಕಿಗೆ ಎಂಗೇಜೆಂಟ್‌ ಆಗಿದೆ. ಆದರೆ, ನೀನು ಆಕೆ ಜೊತೆ ಮಜಾ ಮಾಡ್ತಿದ್ದೀಯ? ಈ ವಿಚಾರವನ್ನ ಆಕೆಯ ತಂದೆ ಹಾಗೂ ನಿನ್ನ ಹೆಂಡತಿಗೆ ತಿಳಿಸ್ತೇನೆಂದು ಉದ್ಯಮಿಗೆ ಧಮಕಿ ಹಾಕಿ ಬ್ಲ್ಯಾಕ್‌ಮೇಲ್‌‍ ಮಾಡಲಾಗಿತ್ತು.

ಆಕೆಗೆ ಬಾಯ್‌ಫ್ರೆಂಡ್‌ ಇರುವ ವಿಚಾರ ತಿಳಿದಿಲ್ಲ. ಆಕೆ ಜೊತೆ ಊಟ ತಿಂಡಿ ಮಾಡಿದ್ದೇನಷ್ಟೇ ಎಂದು ಉದ್ಯಮಿ ಹೇಳಿದ್ದರು. ಮೊಬೈಲ್‌ನಲ್ಲಿ ಮುರಳಿ ಎಂಬಾತನ ಫೋಟೋ ತೋರಿಸಿದ್ದ ಗಣೇಶ್‌ ಹಾಗೂ ಸಾಗರ್‌ ಪೊಲೀಸ್‌‍ ಠಾಣೆಗೆ ಹೋಗೋಣ ಎಂದು ಕಾರಿನಲ್ಲಿ ಉದ್ಯಮಿಯನ್ನು ಕರೆದೊಯ್ದಿದ್ದರು.

ಮಹಾಲಕ್ಷ್ಮಿ ಲೇಔಟ್‌ನ ಉದ್ಯಮಿ ಮನೆ ಬಳಿಯೇ ಕರೆದೊಯ್ದು ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದರು. ನಿನ್ನ ಹೆಂಡತಿಗೆ ವಿಚಾರ ತಿಳಿಸಿ ಆಕೆಯನ್ನು ನಮ್ಮ ಜೊತೆ ಕರೆದುಕೊಂಡು ಹೋಗುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬಳಿಕ ಗೊರಗುಂಟೆಪಾಳ್ಯದ ಕಡೆ ಕಾರು ನಿಲ್ಲಿಸಿ ಹಣದ ವ್ಯವಸ್ಥೆ ಮಾಡಬೇಕೆಂದು ಒತ್ತಡ ಹೇರಿ ಕೊನೆಗೆ 20 ಲಕ್ಷಕ್ಕೆ ಒಪ್ಪಂದವಾಗಿತ್ತು.

ನಂತರ 1.90 ಲಕ್ಷ ಹಣವನ್ನು ಪಡೆದು ನಂತರ ಆರೋಪಿಗಳು ಉದ್ಯಮಿಯನ್ನು ಬಿಟ್ಟುಕಳುಹಿಸಿದ್ದರು. ಆದರೆ ಮಾ.17 ರಂದು ಮತ್ತೆ ಉದ್ಯಮಿಗೆ ಆರೋಪಿ ಶಿಕ್ಷಕಿ ಕರೆ ಮಾಡಿ ಮತ್ತೆ ಉದ್ಯಮಿಗೆ 15 ಲಕ್ಷ ಹಣ ಕೊಡುವಂತೆ ಡಿಮ್ಯಾಂಡ್‌ ಮಾಡಿದ್ದರು. ಹಣ ಕೊಟ್ಟರೆ ಅಶ್ಲೀಲ ವೀಡಿಯೋ ಚಾಟಿಂಗ್‌ ಡಿಲೀಟ್‌ ಮಾಡ್ತೀನಿ. ಇಲ್ಲವಾದರೆ ನಿನ್ನ ಪತ್ನಿಗೆ ತೋರಿಸಿ ನಿನ್ನ ಸಂಸಾರವನ್ನೇ ಹಾಳು ಮಾಡ್ತೀವೆಂದು ಬ್ಲ್ಯಾಕ್‌ಮೇಲ್‌‍ ಮಾಡಿದ್ದಳು.

ಕೊನೆಗೆ ಸಿಸಿಬಿಗೆ ಉದ್ಯಮಿ ದೂರು ನೀಡಿದ್ದರು. ಸದ್ಯ ದೂರಿನನ್ವಯ ಆರೋಪಿ ಶಿಕ್ಷಕಿ, ಸಾಗರ್‌ ಮೋರೆ, ಗಣೇಶ್‌ ಕಾಳೆ ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಈ ವೇಳೆ ಗಣೇಶ್‌ ಕಾಳೆ ಬಿಜಾಪುರ ರೌಡಿಶೀಟರ್‌ ಆಗಿದ್ದು ಈತನ ಮೇಲೆ 9 ಪ್ರಕರಣಗಳು ಇರುವುದು ಪತ್ತೆ ಆಗಿದೆ. ಈ ತಂಡ ಇನ್ನು ಹಲವರಿಗೆ ಹನಿಟ್ರ್ಯಾಪ್‌ ಮಾಡಿರುವ ಸಾಧ್ಯತೆಗಳಿದ್ದು, ಸಚಿವರು ಹಾಗೂ ಪುತ್ರನ ಹನಿಟ್ರ್ಯಾಪ್‌ ಯತ್ನ ನಡುವೆಯೇ ನಗರದಲ್ಲಿ ಉದ್ಯಮಿಯೊಬ್ಬರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ಹಿಂದೆ ಶಾಲಾ ಶಿಕ್ಷಕಿಯನ್ನು ಬಳಸಿಕೊಂಡಿರುವುದು ಭಾರೀ ಸಂಚಲನ ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

43 seconds ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

1 hour ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

2 hours ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

2 hours ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

3 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

4 hours ago