ರಾಜ್ಯ

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್‌ ಚಲಾಯಿಸುತ್ತಾ ಮೊಬೈಲ್‌ ಬಳಸಿದ ಡ್ರೈವರ್‌: ಕ್ರಮಕ್ಕೆ ಎಡಿಜಿಪಿ ಒತ್ತಾಯ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೆಎಸ್‌ಆರ್‌ಟಿಸಿ ವಾಹನ ಚಾಲಕನೊಬ್ಬ ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿಕೊಂಡು ಬಂದಿರುವವನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ನಮ್ಮ ಕಣ್ಣಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಮ್ಮ ಎಲ್ಲಾ ಸಿಸಿಟಿಗಳು ಅಚ್ಚುಕಟ್ಟಾಗಿ ಕೆಲಸ ಮಾಡುತ್ತಿವೆ. ಮೇ.11 ರಂದು ಚೆನ್ನಪಟ್ಟಣ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಕೆಎಸ್‌ಆರ್‌ಟಿಸಿ ವಾಹನ ಚಲಾಯಿಸುತ್ತಿರುವುದನ್ನು ಫೋಟೋ ಸಹಿತ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೇವಲ 15 ದಿನಗಳಲ್ಲಿ 12,192 ಪ್ರಕರಣ ದಾಖಲಾಗಿವೆ. ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಗಳು ನಡೆದರೆ ಅದನ್ನು ನಿಮ್ಮ ಕುಟುಂಬಗಳು ಸಹಿಸಿಕೊಳ್ಳಲಿವೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

https://x.com/alokkumar6994/status/1791335347990749618
ಇನ್ನು ಕೆಎಸ್‌ಆರ್‌ಟಿಸಿ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಎಂದು ದಂಡ ವಿಧಿಸುವುದನ್ನು ಸಹಿತ ಉಲ್ಲೇಖಿಸಿ ಮೊಬೈಲ್‌ ಬಳಸಿ ವಾಹನ ಚಲಾಯಿಸುತ್ತಿರುವುದರ ಮಾಹಿತಿಯನ್ನು ಅಲೋಕ್‌ ಕುಮಾರ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

41 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago