ರಾಜ್ಯ

ಬೆಂಗಳೂರು| ಪೊಲೀಸರಿಗೆ ಹೊಸ ಪೀಕ್‌ ಕ್ಯಾಪ್‌ ವಿತರಣೆ

ಬೆಂಗಳೂರು: ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು.

ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ನಡೆದ ಪೀಕ್‌ ಕ್ಯಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಲಾಗಿತ್ತು. ಆ ಸಂದರ್ಭದಲ್ಲಿ ಯಾವ ಅಧಿಕಾರಿ ಇದ್ದರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳನ್ನು ಓಲೈಸಲು ಪೊಲೀಸರು ತಮನ್ನು ತಾವು ಮಾರಿಕೊಂಡಂತೆ ವೇಷ ಬದಲಾಯಿಸಬಾರದು. ಪೊಲೀಸರು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಜನರ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಅದಕ್ಕೆ ಅವಕಾಶವಿಲ್ಲ ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್‌‍ ಕಾನ್ಸ್‌ಟೇಬಲ್‌ಗಳ ಹುದ್ದೆ ಖಾಲಿ ಇದ್ದು, ಅವುಗಳಲ್ಲಿ 8500 ಹುದ್ದೆಗಳ ನೇಮಕಕ್ಕೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಪೊಲೀಸ್‌‍ ಸಿಬ್ಬಂದಿಗಳ ಪೀಕ್‌ಕ್ಯಾಪ್‌ ಬದಲಾವಣೆ ಐತಿಹಾಸಿಕ ನಿರ್ಧಾರವಾಗಿದ್ದು, ಇದನ್ನು ತಮ್ಮ ಅವಧಿಯಲ್ಲಿ ಕೈಗೊಂಡಿರುವುದು ಸಂತಸದ ವಿಚಾರ. ಲಂಡನ್‌, ಆಸ್ಟ್ರೇಲಿಯಾದಲ್ಲಿ ಸ್ಲೋಜ್‌ ಹ್ಯಾಟ್‌ ಧರಿಸಲಾಗುತ್ತಿತ್ತು. 1953ರಲ್ಲಿ ಭಾರತದ ಸಶಸ್ತ್ರ ಪಡೆಗಳಿಗೂ ಸ್ಲೋಜ್‌ ಹ್ಯಾಟ್‌ ನಿಗದಿಪಡಿಸಲಾಗಿತ್ತು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

3 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

3 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

5 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

5 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago