ರಾಜ್ಯ

ಬೆಂಗಳೂರು| ಪೊಲೀಸರಿಗೆ ಹೊಸ ಪೀಕ್‌ ಕ್ಯಾಪ್‌ ವಿತರಣೆ

ಬೆಂಗಳೂರು: ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು.

ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ನಡೆದ ಪೀಕ್‌ ಕ್ಯಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಲಾಗಿತ್ತು. ಆ ಸಂದರ್ಭದಲ್ಲಿ ಯಾವ ಅಧಿಕಾರಿ ಇದ್ದರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳನ್ನು ಓಲೈಸಲು ಪೊಲೀಸರು ತಮನ್ನು ತಾವು ಮಾರಿಕೊಂಡಂತೆ ವೇಷ ಬದಲಾಯಿಸಬಾರದು. ಪೊಲೀಸರು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಜನರ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಅದಕ್ಕೆ ಅವಕಾಶವಿಲ್ಲ ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್‌‍ ಕಾನ್ಸ್‌ಟೇಬಲ್‌ಗಳ ಹುದ್ದೆ ಖಾಲಿ ಇದ್ದು, ಅವುಗಳಲ್ಲಿ 8500 ಹುದ್ದೆಗಳ ನೇಮಕಕ್ಕೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಪೊಲೀಸ್‌‍ ಸಿಬ್ಬಂದಿಗಳ ಪೀಕ್‌ಕ್ಯಾಪ್‌ ಬದಲಾವಣೆ ಐತಿಹಾಸಿಕ ನಿರ್ಧಾರವಾಗಿದ್ದು, ಇದನ್ನು ತಮ್ಮ ಅವಧಿಯಲ್ಲಿ ಕೈಗೊಂಡಿರುವುದು ಸಂತಸದ ವಿಚಾರ. ಲಂಡನ್‌, ಆಸ್ಟ್ರೇಲಿಯಾದಲ್ಲಿ ಸ್ಲೋಜ್‌ ಹ್ಯಾಟ್‌ ಧರಿಸಲಾಗುತ್ತಿತ್ತು. 1953ರಲ್ಲಿ ಭಾರತದ ಸಶಸ್ತ್ರ ಪಡೆಗಳಿಗೂ ಸ್ಲೋಜ್‌ ಹ್ಯಾಟ್‌ ನಿಗದಿಪಡಿಸಲಾಗಿತ್ತು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

10 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

10 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

12 hours ago