ಬೆಂಗಳೂರು: ಪೊಲೀಸ್ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನಡೆದ ಪೀಕ್ ಕ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಲಾಗಿತ್ತು. ಆ ಸಂದರ್ಭದಲ್ಲಿ ಯಾವ ಅಧಿಕಾರಿ ಇದ್ದರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳನ್ನು ಓಲೈಸಲು ಪೊಲೀಸರು ತಮನ್ನು ತಾವು ಮಾರಿಕೊಂಡಂತೆ ವೇಷ ಬದಲಾಯಿಸಬಾರದು. ಪೊಲೀಸರು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಜನರ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಅದಕ್ಕೆ ಅವಕಾಶವಿಲ್ಲ ಎಂದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್ ಕಾನ್ಸ್ಟೇಬಲ್ಗಳ ಹುದ್ದೆ ಖಾಲಿ ಇದ್ದು, ಅವುಗಳಲ್ಲಿ 8500 ಹುದ್ದೆಗಳ ನೇಮಕಕ್ಕೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಪೊಲೀಸ್ ಸಿಬ್ಬಂದಿಗಳ ಪೀಕ್ಕ್ಯಾಪ್ ಬದಲಾವಣೆ ಐತಿಹಾಸಿಕ ನಿರ್ಧಾರವಾಗಿದ್ದು, ಇದನ್ನು ತಮ್ಮ ಅವಧಿಯಲ್ಲಿ ಕೈಗೊಂಡಿರುವುದು ಸಂತಸದ ವಿಚಾರ. ಲಂಡನ್, ಆಸ್ಟ್ರೇಲಿಯಾದಲ್ಲಿ ಸ್ಲೋಜ್ ಹ್ಯಾಟ್ ಧರಿಸಲಾಗುತ್ತಿತ್ತು. 1953ರಲ್ಲಿ ಭಾರತದ ಸಶಸ್ತ್ರ ಪಡೆಗಳಿಗೂ ಸ್ಲೋಜ್ ಹ್ಯಾಟ್ ನಿಗದಿಪಡಿಸಲಾಗಿತ್ತು ಎಂದು ಹೇಳಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…