ರಾಜ್ಯ

ಬೆಂಗಳೂರು ಪ್ರೆಸ್ ಕ್ಲಬ್: ಡಿಕೆ ಶಿವಕುಮಾರ್‌ಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್‌ಕ್ಲಬ್‌ ಆಫ್ ಬೆಂಗಳೂರು ಕೊಡಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಲಾಯಿತು. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ವಿಶೇಷ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದು ಹೇಳಿದರು.

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು. ನನ್ನನ್ನು ಜೆಡಿಎಸ್ ನಿಂದ ಉಚ್ಛಾಟಣೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದರು.

https://x.com/CMofKarnataka/status/1741400484429357414?s=20

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago