ರಾಜ್ಯ

ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು.

ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ…
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಾಯಿ ಲೇಔಟ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

39 mins ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

1 hour ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

2 hours ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

10 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

10 hours ago