ರಾಜ್ಯ

ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು.

ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ…
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಾಯಿ ಲೇಔಟ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

23 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

30 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

1 hour ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

3 hours ago