ರಾಜ್ಯ

ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು.

ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ…
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಾಯಿ ಲೇಔಟ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

6 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

9 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

10 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

11 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

11 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

11 hours ago