ರಾಜ್ಯ

ಬೆಂಗಳೂರಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಜನನಿಬಿಡ ಪ್ರಮುಖ ಪ್ರದೇಶಗಳೂ ಸಹ ಜಲಾವೃತವಾಗಿದ್ದು, ಇಂದೂ ( ಅಕ್ಟೋಬರ್‌ 22 ) ಸಹ ಮಳೆ ಅಬ್ಬರಿಸಿದೆ. ಇನ್ನು ಹವಾಮಾನ ಇಲಾಖೆಯ ಪ್ರಕಾರ ನಾಳೆಯೂ ಸಹ ಮಳೆ ಮುಂದುವರಿಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಜಗದೀಶ್‌ ನಾಳೆ ನಗರ ಹಾಗೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಎಂದು ಆದೇಶ ಹೊರಡಿಸಿದ್ದಾರೆ.

ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೂ ರಜೆ ನೀಡುವಂತೆ ಆದೇಶಿಸಲಾಗಿದ್ದು, ಶನಿವಾರ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ಪಿಯು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ಯಾವುದೇ ರಜೆಯ ಆದೇಶವನ್ನು ಹೊರಡಿಸಿಲ್ಲ.

ಟಾಟಾ ನಗರ, ಯಲಹಂಕ ಜಲಾವೃತ: ಹೆಬ್ಬಾಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಸಹಕಾರನಗರ ಹಾಗೂ ಟಾಟಾ ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನರನ್ನು ಸುರಕ್ಷಿತ ಜಾಗಗಳಿಗೆ ಸಾಗಿಸುವ ಕಾರ್ಯ ಸಾಗಿದೆ. ಅತ್ತ ಯಲಹಂಕದಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ವಾಹನಗಳು ನೀರಿನಲ್ಲಿ ತೇಲುವಷ್ಟು ನೀರು ಜನ ಪ್ರದೇಶಗಳಿಗೆ ನುಗ್ಗಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರ ಸಾವು: ಇನ್ನು ಕಮ್ಮನಹಳ್ಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಬೃಹತ್‌ ಕಟ್ಟಡ ಕುಸಿತಗೊಂಡಿದ್ದು, ಕೆಲಸದಲ್ಲಿ ತೊಡಗಿದ್ದ 16 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದರು. ಕೂಡಲೇ ರಕ್ಷಣಾ ಕಾರ್ಯ ಆರಂಭವಾಗಿದ್ದು, ಈ ಪೈಕಿ ಈಗಾಗಲೇ ಮೂವರು ದುರ್ಮರಣ ಹೊಂದಿದ್ದಾರೆ.

andolana

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

4 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

4 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

5 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

5 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

5 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

6 hours ago