ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಜನನಿಬಿಡ ಪ್ರಮುಖ ಪ್ರದೇಶಗಳೂ ಸಹ ಜಲಾವೃತವಾಗಿದ್ದು, ಇಂದೂ ( ಅಕ್ಟೋಬರ್ 22 ) ಸಹ ಮಳೆ ಅಬ್ಬರಿಸಿದೆ. ಇನ್ನು ಹವಾಮಾನ ಇಲಾಖೆಯ ಪ್ರಕಾರ ನಾಳೆಯೂ ಸಹ ಮಳೆ ಮುಂದುವರಿಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಜಗದೀಶ್ ನಾಳೆ ನಗರ ಹಾಗೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಎಂದು ಆದೇಶ ಹೊರಡಿಸಿದ್ದಾರೆ.
ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೂ ರಜೆ ನೀಡುವಂತೆ ಆದೇಶಿಸಲಾಗಿದ್ದು, ಶನಿವಾರ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.
ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ಪಿಯು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ಯಾವುದೇ ರಜೆಯ ಆದೇಶವನ್ನು ಹೊರಡಿಸಿಲ್ಲ.
ಟಾಟಾ ನಗರ, ಯಲಹಂಕ ಜಲಾವೃತ: ಹೆಬ್ಬಾಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಸಹಕಾರನಗರ ಹಾಗೂ ಟಾಟಾ ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನರನ್ನು ಸುರಕ್ಷಿತ ಜಾಗಗಳಿಗೆ ಸಾಗಿಸುವ ಕಾರ್ಯ ಸಾಗಿದೆ. ಅತ್ತ ಯಲಹಂಕದಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ವಾಹನಗಳು ನೀರಿನಲ್ಲಿ ತೇಲುವಷ್ಟು ನೀರು ಜನ ಪ್ರದೇಶಗಳಿಗೆ ನುಗ್ಗಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರ ಸಾವು: ಇನ್ನು ಕಮ್ಮನಹಳ್ಳಿಯ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿತಗೊಂಡಿದ್ದು, ಕೆಲಸದಲ್ಲಿ ತೊಡಗಿದ್ದ 16 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದರು. ಕೂಡಲೇ ರಕ್ಷಣಾ ಕಾರ್ಯ ಆರಂಭವಾಗಿದ್ದು, ಈ ಪೈಕಿ ಈಗಾಗಲೇ ಮೂವರು ದುರ್ಮರಣ ಹೊಂದಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…