ಬೆಂಗಳೂರು: ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಜ.23ರಂದು ಪಿಎಸ್ಐ (ಸಿವಿಲ್- ಪುರುಷ ಹಾಗೂ ಮಹಿಳಾ) ನೇಮಕಾತಿಗೆ ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
ಪಿಎಸ್ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
545 ಪಿಎಸ್ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಇದರ ನಡುವೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.
ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು, ಇನ್ಸ್ಪೆಕ್ಟರ್ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…