ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ : ಎನ್‌ಐಎ ತನಿಖೆ ಸಾಧ್ಯತೆ

ಬೆಂಗಳೂರು : 11 ಜನ ಸಾವಿಗೆ ಕಾರಣವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‍ಐಎ) ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕಾಲ್ತುಳಿತ ಪ್ರಕರಣವು ದಿನದಿಂದ ದಿನಕ್ಕೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿರುವುದರಿಂದ ಎನ್‍ಐಎ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದಿನ ವಾರದಿಂದ ಪ್ರಾರಂಭಿಸಲಿದೆ ಎಂದು ಗೊತ್ತಾಗಿದೆ.

ಇದು ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಇದರ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ ಇದೆಯೇ ಎಂಬುದನ್ನು ಪತ್ತೆ ಮಾಡಲು ಎನ್‍ಐಎ ಮುಂದಾಗಿದೆ.

ಮೂಲಗಳ ಪ್ರಕಾರ ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಕೆಲವು ಅಧಿಕಾರಿಗಳ ಮೇಲೆ ಸರ್ಕಾರದ ಮಟ್ಟದಲ್ಲಿ ಪ್ರಭಾವಿಯಾಗಿರುವವರ ಒತ್ತಡ ಹಾಕಿಯೇ ಆಯೋಜನೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಏಕಾಏಕಿ ಕಾರ್ಯಕ್ರಮವನ್ನು ಆಯೋಜಿಸಿದ್ದರ ಉದ್ದೇಶ? ಕಾರ್ಯಕ್ರಮದಲ್ಲಿ ಪ್ರಭಾವಿ ಸಚಿವರ ಪುತ್ರರೊಬ್ಬರು ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಏಕೆ ಎಂಬ ಪ್ರಶ್ನೆ ಎದುರಾಗಿದೆ.

ಹೀಗಾಗಿ ಪ್ರಕರಣದ ಹಿಂದೆ ಯಾವುದಾದರೂ ಸಂಘಟನೆಗಳ ಕೈವಾಡ, ಸಮಾಜಘಾತುಕ ಶಕ್ತಿಗಳ ಶಾಮೀಲು ಕುರಿತಂತೆ ಎನ್‍ಐಎ ತನಿಖೆ ನಡೆಸಲು ಮುಂದಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್‍ಕುಮಾರ್, ಡಿಸಿಪಿ ಶೇಖರ್ ಅವರುಗಳ ದೂರವಾಣಿ ಕರೆಗಳ ವಿವರವನ್ನು ನೀಡುವಂತೆ ಎನ್‍ಐಎ ಈಗಾಗಲೇ ಸೂಚನೆ ಕೊಟ್ಟಿದೆ.

ಇದನ್ನೂ ಓದಿ:- 11 ಜನರ ಸಾವಿಗೆ ಸಿಎಂ, ಡಿಸಿಎಂ, ಗೃಹ ಸಚಿವರೇ ನೇರ ಹೊಣೆ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್

ಕಾರ್ಯಕ್ರಮ ಆಯೋಜಿಸಲು ಕೆಲವು ಹಿರಿಯ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರದ ಮಟ್ಟದಲ್ಲಿ ಪ್ರಭಾವಶಾಲಿಯಾಗಿರುವ ಇಬ್ಬರು ಒತ್ತಡ ಹಾಕಿಯೇ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂಬ ಆರೋಪವೂ ಇದೆ.

ಆರ್.ಸಿ.ಬಿ ವಿಜೇತರಾದ ನಂತರ ಬೆಂಗಳೂರಿಗೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ನಿರೀಕ್ಷೆಗೂ ಮೀರಿದ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧದತ್ತ ದೌಡಾಯಿಸಿದ್ದರು.

ಇಷ್ಟು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಆಗಮಿಸಿದ್ದರೂ ಭದ್ರತೆಯನ್ನು ಏಕೆ ಒದಗಿಸಲಾಗಲಿಲ್ಲ? ಉದ್ದೇಶಪೂರಕವಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಇಲ್ಲವೇ ಆಕಸ್ಮಿಕವಾಗಿ ನಡೆದ ಘಟನೆಯೇ ಎಂಬುದರ ಬಗ್ಗೆ ವಿಸ್ತೃತ ತನಿಖೆಯನ್ನು ಎನ್‍ಐಎ ಕೈಗೆತ್ತಿಕೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago