ರಾಜ್ಯ

ಬೆಂಗಳೂರಿನಲ್ಲಿ ನವೆಂಬರ್‌.4ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನವೆಂಬರ್ 4 ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

2 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

2 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

3 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

3 hours ago