ರಾಜ್ಯ

ಬೆಂಗಳೂರಿನಲ್ಲಿ ನವೆಂಬರ್‌.4ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನವೆಂಬರ್ 4 ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

6 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago