ರಾಜ್ಯ

ಬೆಂಗಳೂರಿನಲ್ಲಿ ನವೆಂಬರ್‌.4ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರಿನಲ್ಲಿ ನವೆಂಬರ್ 4 ರಿಂದ 6ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 seconds ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago