ರಾಜ್ಯ

ಬೆಂಗಳೂರು: ಸೀರಿಯಲ್‌ ನಟಿಯ ಮದುವೆ ಟಾರ್ಚರ್‌ಗೆ ಪ್ರಾಣ ಬಿಟ್ಟ ಯುವಕ…

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದ್ದ ಯುವತಿ ಒಂಟಿಯಾಗಿ ಬದುಕು ಕಟ್ಟಿಕೊಂಡಿದ್ದಳು. ಆದರೆ, ಆಕೆಯ ಮನೆಯಲ್ಲಿ ಪತ್ತೆಯಾದ ಯುವಕನ ಮೃತದೇಹ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆಕೆಯ ಮದುವೆ ಕಾಟಕ್ಕೆ ಯುವಕ ಪ್ರಾಣಬಿಟ್ಟಿದ್ದಾನೆಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸದ್ಯ, ಮೃತನ ತಾಯಿಯ ದೂರಿನ ಮೇರೆಗೆ ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಯುವತಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ನಡೆಸತ್ತಿದ್ದಾರೆ.

ಬೆಂಗಳೂರಿನ ಪಿಳ್ಳಹಾನಹಳ್ಳಿ ನಿವಾಸಿ(25)ಮದನ್‌ ಪ್ರಾಣಬಿಟ್ಟ ಯುವಕ. ಇನ್ನೂ ಸೀರಿಯಲ್‌ ನಟಿ ವೀಣಾ ಕಾಟಕ್ಕೆ ಯುವಕ ಸಾವನ್ನಪ್ಪಿರುವುದು. ಈಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಜನನಿ ಎಂಬ ಧಾರವಾಹಿ ಸೇರಿದಂತೆ ಅನೇಕ ಸೀರಿಯಲ್‌ನಲ್ಲಿ ನಟಿಸಿದ್ದಳು.

ನಗರದ ಸಿ.ಕೆ ಪಾಳ್ಯ ರಸ್ತೆಯಲ್ಲಿರುವ ಲೇಔಟ್‌ನ ಮನೆಯಲ್ಲಿ ವೀಣಾ ಒಂಟಿಯಾಗಿ ಬದುಕು ಕಟ್ಟಿಕೊಂಡಿದ್ದಳು. ಹೀಗಿದ್ದವಳಿಗೆ ವರ್ಷದ ಹಿಂದೆ ಮದನ್‌ ಪರಿಚಯವಾಗಿದೆ. ಆ ಪರಿಚಯ, ಸ್ನೇಹ ನಂತರ ಪ್ರೀತಿಯಾಗಿ ತಿರುಗಿದೆ. ಈ ಪ್ರೀತಿಯೆ ಮದನ್‌ನನ್ನ ಬಲಿ ಪಡೆದಿದೆ.

ಮದನ್‌ನ ಮನಸ್ಸಾರೆ ಇಷ್ಟ ಪಟ್ಟಿದ್ದ ವೀಣಾನಿಗೆ ಬೇರೆ ಹುಡುಗರ ಪರಿಚಯವೂ ಇದ್ದು, ಮದನ್‌ ಸ್ನೇಹಿತನನ್ನೂ ಆಕೆ ಇಷ್ಟ ಪಟ್ಟಿದ್ದಳಂತೆ. ಹೀಗಾಗಿ, ವೀಣಾ ಮೇಲೆ ಅನುಮಾನ ಪಟ್ಟಿದ್ದ ಮದನ್‌ ಮದುವೆಗೆ ಒಲ್ಲೆ ಅಂದಿದ್ದ. ಬಳಿಕ ಕೋಪಗೊಂಡಿದ್ದ ವೀಣಾ ಒಮ್ಮೆ ಮದನ್‌ ಮನೆ ಮುಂದೆ ಬೀದಿ ರಂಪಾಟ ಮಾಡಿದ್ದಳಂತೆ. ಹೀಗೆ ಈ ರಂಪಾಟ ಮುಂದುವರೆದಿದ್ದರು ಇವರ ಪ್ರೇಮಕ್ಕೇನು ಫುಲ್‌ಸ್ಟಾನ್‌ ಬಿದ್ದಿರ್ಲಿಲ್ಲ. ಆದ್ರೆ, ಈ ಮಧ್ಯೆ, ನಿನ್ನೆ ರಾತ್ರಿ ಹೊತ್ತಲ್ಲಿ ಮದನ್‌ಗೆ ಪಾರ್ಟಿ ಮಾಡೋಣ ಅಂತಾ ಕರೆದ ವೀಣಾ, ಮದುವೆ ಆಗುವಂತೆ ಒತ್ತಾಯ ಮಾಡಿದ್ದಳು.

ಪ್ರೀತಿ ಕೊಂದ ಕೊಲೆಗಾತಿ..!
ಇಬ್ಬರು ಪಾರ್ಟಿಯಲ್ಲಿ ಕಂಠ ಪೂರ್ತಿ ಕುಡಿದ್ದಿದ್ದಾರೆ. ಡ್ರಿಂಕ್ಸ್‌ ಮಾಡುತ್ತಲೇ ಇಬ್ಬರ ಮಾತಿನ ವರಸೆ ಬದಲಾಗಿದ್ದು, ವೀಣಾ ಮದುವೆ ಮ್ಯಾಟ್ರೂ ತೆಗೆದು, ಮದುವೆ ಆಗುವಂತೆ ಒತ್ತಾಯಿಸಿದ್ದಾಳೆ. ಆದರೆ, ವೀಣಾ ಬಗ್ಗೆ ಅನುಮಾನ ಇಟ್ಟುಕೊಂಡಿದ್ದ ಮದನ್‌ಗೆ ಸುತರಾಮ್‌ ಇಷ್ಟವಿರಲಿಲ್ಲ. ಹೀಗಾಗಿ, ಮಾತಿನ ಚಟಾಪಟಿ ಜಗಳಕ್ಕೆ ತಿರುಗಿದೆ. ಈ ಜಗಳ ಮಧ್ಯೆಯೆ ಮದನ್‌ ವಾಶ್‌ ರೊಂಗೆ ಹೋಗಿದ್ದಾನೆ. ತುಂಬಾ ಹೊತ್ತಾದ್ರು ಆತ ಬಂದಿಲ್ಲ…. ಹೀಗಾಗಿ, ಏನಾಯ್ತು, ಅಂತಾ ನೋಡಲು ಹೋದ ವೀಣಾಗೆ ಅಕ್ಷರಶಃ ಶಾಕ್‌ ಆಗಿದೆ. ಯಾಕಂದ್ರೆ, ಆತನ ದೇಹ ಫ್ಯಾನ್‌ನಲ್ಲಿ ನೇತಾಡ್ತಿತ್ತು.

ಇನ್ನೂ. ಇತ್ತ ಮದನ್‌ ತಾಯಿ ವೀಣಾ ವಿರುದ್ದ ಆರೋಪ ಮಾಡಿದ್ದು, ನನ್ನ ಮಗನಿಗೆ ಈಕೆ ಮಾನಸಿಕ ಕಿರುಕುಳ ನೀಡಿದ್ದಾರೆ ಅತ್ಮಹತ್ಯೆ ಪ್ರಚೋದನೆ ನೀಡಿರೋದಾಗಿ ದೂರು ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಹುಳಿಮಾವು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬರಸ್ಥರಿಗೆ ಹಸ್ತಾಂತರಿದ್ದಾರೆ. ಸದ್ಯ, ಮದನ್‌ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆ ಬಳಿಕ ಮದನ್‌ ಸಾವಿನ ಅಸಲಿ ಕಾರಣ ಗೊತ್ತಾಗಲಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

4 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

6 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

8 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

10 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

11 hours ago