ರಾಜ್ಯ

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್‌ ರಸ್ತೆ, ಆರ್‌.ಟಿ. ಸ್ಟ್ರೀಟ್‌, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ ವೈಟ್‌ ಟಾಪಿಂಗ್‌ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಕೇಂದ್ರದಿಂದ ಒಂದು ರೂ.ಕೂಡ ನೆರವು ಸಿಗುತ್ತಿಲ್ಲ. ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿ: ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಗುಂಡಿಗಳ ದರ್ಬಾರ್

ಇನ್ನೊಂದು ವಾರದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲೇ ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಬಾರಿ ಮಳೆ ಹೆಚ್ಚಾಗಿ ಬಂದಿದ್ದದರಿಂದಾಗಿ ಗುಂಡಿಗಳನ್ನು ಮುಚ್ಚಲು ಕಷ್ಟವಾಗುತ್ತಿದೆ. ವೈಟ್‌ ಟಾಪಿಂಗ್‌ ಕಾಮಗಾರಿ ಇದಕ್ಕೆ ಪರಿಹಾರವಾಗಿದೆ. ಸದ್ಯಕ್ಕೆ ರಸ್ತೆಗಳಿಗೆ ಒಂದು ಪದರದ ಟಾರ್‌ ಹಾಕುವಂತೆ ಜಿಬಿಎ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಬಾರಿ ಎಲ್ಲಾ ಶಾಸಕರಿಗೂ ಹಣ ನೀಡಲು ಬಜೆಟ್‌ನಲ್ಲಿ 8 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿಕೊಂಡಿದ್ದಾಗಿ ಹೇಳಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದ ಶಾಸಕರ ಜೊತೆಗೆ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಹಣ ನೀಡಲಾಗುತ್ತದೆ. ಈ ಮೂಲಕ ಸಮಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಅವರ ಕಾಲದಲ್ಲಿ ಗುಂಡಿಗಳಿರಲಿಲ್ಲವೇ ಎಂದು ಕಿಡಿಕಾರಿದ ಮುಖ್ಯಮಂತ್ರಿ ಅವರು, ಹಿಂದೆ ನಾವು ಮಾಡಿದ ರಸ್ತೆಗಳನ್ನು ಹೊರತು ಪಡಿಸಿದರೆ ಬಿಜೆಪಿಯವರ ಯೋಗ್ಯತೆಗೆ ಆಡಳಿತ ನಡೆಸಿದಾಗ ಒಂದು ಹಿಡಿ ಮಣ್ಣು ಹಾಕಿರಲಿಲ್ಲ. ಜೊತೆಗೆ ಹಣ ಇಲ್ಲದೇ ಇದ್ದರೂ 2.10 ಲಕ್ಷ ರೂ. ವೆಚ್ಚದ ಯೋಜನೆಗಳಿಗೆ ಮಂಜೂರಾತಿ ನೀಡಿದ್ದರು. ಅದೆಲ್ಲಾ ಬಾರವೂ ನಮ ಮೇಲೆ ಬಿದ್ದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago