ರಾಜ್ಯ

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್‌ ರಸ್ತೆ, ಆರ್‌.ಟಿ. ಸ್ಟ್ರೀಟ್‌, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ ವೈಟ್‌ ಟಾಪಿಂಗ್‌ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಕೇಂದ್ರದಿಂದ ಒಂದು ರೂ.ಕೂಡ ನೆರವು ಸಿಗುತ್ತಿಲ್ಲ. ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿ: ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಗುಂಡಿಗಳ ದರ್ಬಾರ್

ಇನ್ನೊಂದು ವಾರದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲೇ ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಬಾರಿ ಮಳೆ ಹೆಚ್ಚಾಗಿ ಬಂದಿದ್ದದರಿಂದಾಗಿ ಗುಂಡಿಗಳನ್ನು ಮುಚ್ಚಲು ಕಷ್ಟವಾಗುತ್ತಿದೆ. ವೈಟ್‌ ಟಾಪಿಂಗ್‌ ಕಾಮಗಾರಿ ಇದಕ್ಕೆ ಪರಿಹಾರವಾಗಿದೆ. ಸದ್ಯಕ್ಕೆ ರಸ್ತೆಗಳಿಗೆ ಒಂದು ಪದರದ ಟಾರ್‌ ಹಾಕುವಂತೆ ಜಿಬಿಎ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಬಾರಿ ಎಲ್ಲಾ ಶಾಸಕರಿಗೂ ಹಣ ನೀಡಲು ಬಜೆಟ್‌ನಲ್ಲಿ 8 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿಕೊಂಡಿದ್ದಾಗಿ ಹೇಳಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದ ಶಾಸಕರ ಜೊತೆಗೆ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಹಣ ನೀಡಲಾಗುತ್ತದೆ. ಈ ಮೂಲಕ ಸಮಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ ಎಂದು ಬಿಜೆಪಿಯವರು ಟೀಕೆ ಮಾಡುತ್ತಾರೆ. ಅವರ ಕಾಲದಲ್ಲಿ ಗುಂಡಿಗಳಿರಲಿಲ್ಲವೇ ಎಂದು ಕಿಡಿಕಾರಿದ ಮುಖ್ಯಮಂತ್ರಿ ಅವರು, ಹಿಂದೆ ನಾವು ಮಾಡಿದ ರಸ್ತೆಗಳನ್ನು ಹೊರತು ಪಡಿಸಿದರೆ ಬಿಜೆಪಿಯವರ ಯೋಗ್ಯತೆಗೆ ಆಡಳಿತ ನಡೆಸಿದಾಗ ಒಂದು ಹಿಡಿ ಮಣ್ಣು ಹಾಕಿರಲಿಲ್ಲ. ಜೊತೆಗೆ ಹಣ ಇಲ್ಲದೇ ಇದ್ದರೂ 2.10 ಲಕ್ಷ ರೂ. ವೆಚ್ಚದ ಯೋಜನೆಗಳಿಗೆ ಮಂಜೂರಾತಿ ನೀಡಿದ್ದರು. ಅದೆಲ್ಲಾ ಬಾರವೂ ನಮ ಮೇಲೆ ಬಿದ್ದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 hour ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 hour ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

6 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

6 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 hours ago